Sunday, November 30, 2008

ಹನ್ನೊಂದನೆ ತಿಂಗಳ ಹುಟ್ಟು ಹಬ್ಬ :)

ಪುಟ್ಟಿಯ ಹನ್ನೊಂದನೆ ತಿಂಗಳ ಹುಟ್ಟು ಹಬ್ಬ ಬಂದೇ ಬಿಡ್ತು. ಭಾರತಕ್ಕೆ ಅಜ್ಜಿ- ತಾತನ ಮನೆಗೆ ಹೋಗಿದ್ದ ಅವಳ ಫ್ರೆಂಡ್ಸ್ ಶಕ್ತಿ, ಸುಮುಖ್ ಮತ್ತು ಸಿದ್ದಾರ್ಥ್ ಅಣ್ಣ ಇವೆರೆಲ್ಲ ವಾಪಸ್ ಬಂದಿದ್ರು. ಪುಟ್ಟಿ ಜೊತೆ ಆಡಲು ಹೊಸ ಹೊಸ ಆಟ ಕಲಿತು ಬಂದಿದ್ದ್ರು. ಸದ್ಯದಲ್ಲೇ ತಾನೂ ಅಪ್ಪ-ಅಮ್ಮನ ಜೊತೆ ಇಂಡಿಯಾದಲ್ಲಿರುವ ಅಜ್ಜ-ಅಜ್ಜಿ ಮನೆಗೆ ಹೋಗೋದಕ್ಕೆ ರೆಡಿಯಾಗ್ತಾ ಇರುವ ಪುಟ್ಟಿ ಅವರಿಂದ ಹಲವು ಟಿಪ್ಸ್ ತಗೊಂಡ್ಲು. ಎಲ್ಲರೂ ಕೇಕ್ ತಿಂದು ಸಂತಸ ಪಟ್ಟರು...

Monday, November 24, 2008

ಪುಟ್ಟಿಯ ಮೊದಲ Fall !!

ಟೈಟಲ್ ನೋಡಿ ಪುಟ್ಟಿ ಬಿದ್ದ್ ಬಿಟ್ಟ್ಲಾ ಅಂತ ಯೋಚಿಸಿದ್ರಾ? ಅಯ್ಯೊ ಇಲ್ಲಾ... ಈಗಿಲ್ಲಿ Autumn / ಶರದ್ /Fall ಎನ್ನುವ ಎಲೆಗಳು ಉದುರೋ ಕಾಲ ಶುರುವಾಗಿದೆ. ಎಲೆಗಳನ್ನೆಲ್ಲಾ ಉದುರಿಸಿ ಚಳಿಗಾಲಕ್ಕೆ ಪೂರಾ ಬೋಳಾಗಿ ನಿಲ್ಲುವ ಮೇಪಲ್, ಬರ್ಚ್, ಎಲ್ಮ್, ಕೆಲಬಗೆಯ ಓಕ್ ಮುಂತಾದ ಮರಗಳಲ್ಲಿ ಎಲೆ ಉದುರುವುದಕ್ಕೆ ಮುನ್ನ ಸಂಭವಿಸುವ ವರ್ಣವೈಭವದಲ್ಲಿ ಕಣ್ಣು ತುಂಬುವಷ್ಟು ಬಣ್ಣ. ಸೆಪ್ಟೆಂಬರ್ ನಲ್ಲಿ ಅಧಿಕೃತವಾಗಿ fall ಶುರುವಾದಾಗ ಇಲ್ಲಿಯವರೆಗೂ ಹಸಿರಾಗಿದ್ದ ಎಲೆಗಳೆಲ್ಲ...

Friday, November 14, 2008

ಮಕ್ಕಳ ದಿನಾಚರಣೆ ಶುಭಾಶಯಗಳು !!

ಜವಹರ್ ಲಾಲ್ ನೆಹರೂ ಅವರಿಗೆ ಮಕ್ಕಳೆಂದರೆ ಬಲು ಇಷ್ಟವಂತೆ. ಮಕ್ಕಳು ಕೊಟ್ಟ ಗುಲಾಬಿಯನ್ನು ತಮ್ಮ ಕೋಟಿನ ಜೇಬಿಗೆ ಸೇರಿಸಿ ಸಂತೋಷಪಡುತ್ತಿದ್ದರಂತೆ. ಮಕ್ಕಳು ಮತ್ತು ಹೂವುಗಳನ್ನು ಹೋಲಿಸುತ್ತಿದ್ದ ನೆಹರು, "ಮಕ್ಕಳೆಂದರೆ ಹೋದೋಟದಲ್ಲಿರುವ ಸುಂದರ ಮೊಗ್ಗುಗಳು" ಎನ್ನುತ್ತಿದ್ದರಂತೆ. ಪುಟ್ಟ ಮಕ್ಕಳ ಕುರಿತು ಕಾಳಜಿ ವಹಿಸಬೇಕು, ಮಕ್ಕಳನ್ನು ಪ್ರೀತಿಯಿಂದ ಪೋಷಿಸಬೇಕು, ಮಕ್ಕಳೇ ದೇಶದ ಭವಿಷ್ಯ ಹಾಗೂ ನಾಳಿನ ನಾಗರಿಕರು ಎಂಬುದು ನೆಹರು ಅಭಿಮತ. ಮಕ್ಕಳ ಮೇಲಿದ್ದ ಇವರ ಅಕ್ಕರೆ,...

Wednesday, November 05, 2008

ಸಾವು ಕೊನೆಯಲ್ಲ ...

ಕೋಣೆಯ ತುಂಬಾ ಮೌನ ಆವರಿಸಿತ್ತು. ಸವಿತಾಳ ಅಳುವಿನ ಸಣ್ಣದನಿಯೊಂದೇ ಆಗಾಗ್ಗೆ ಆ ಮೌನ ಮುರಿಯುತ್ತಿತ್ತು. ಹಾಸಿಗೆಯ ಮೇಲೆ ಮಲಗಿದ್ದ ತನ್ನ ಕಂದನನ್ನು ನೋಡಿ ಮತ್ತೆ ಮತ್ತೆ ಬಿಕ್ಕಳಿಸುತ್ತಿದ್ದಳು. ತನ್ನ ಮುದ್ದು ಅವಿನಾಶ್ ಇನ್ನಿಲ್ಲವೆಂದು ಡಾಕ್ಟರ್ ಆಗಷ್ಟೆ ಹೇಳಿದ ಮಾತನ್ನು ನಂಬಲು ಅವಳಿಂದ ಆಗುತ್ತಿಲ್ಲ. "ಆ ದೇವರು ಇಷ್ಟು ಕ್ರೂರಿ ಆಗಲು ಹೇಗೆ ಸಾಧ್ಯ? ಈ ಎಳೆ ಕಂದಮ್ಮನಿಗೆ ಈ ಘೋರ ಶಿಕ್ಷೆ ಏಕೆ?" ಎಂದೆಲ್ಲಾ ಯೋಚಿಸುತ್ತಾ ಮಲಗಿದ್ದ ಮಗನ ದೇಹ ದಿಟ್ಟಿಸಿ ಕಣ್ಣೀರೊರೆಸಿಕೊಂಡಳು. "ಅವಿ, ನಾ ನಿನ್ನ ಸಾಯೋಕೆ ಬಿಡೋಲ್ಲ ಪುಟ್ಟು, ಯಾರ್ ಏನೇ ಹೇಳಿದರೂ ಸರಿ ನೀನು ಸಾಯುವುದಿಲ್ಲ" ಸವಿತ ಬಡಬಡಿಸುತ್ತಾ ಹಾಸಿಗೆಯ ತುದಿಯಲ್ಲಿ ಕುಸಿದಳು.ಉಲ್ಲಾಸ್ ಜೊತೆ ಮಾತನಾಡುತ್ತಾ ಕೋಣೆಗೆ ಬಂದರು ಪ್ರಖ್ಯಾತ...

Saturday, November 01, 2008

ಕನ್ನಡದ ಕಂದ !

ನಮ್ಮ್ ಪುಟ್ಟಿ ಕನ್ನಡ ರಾಜ್ಯೋತ್ಸವ ಆಚರಿಸಿದ್ದು ಹೀಗೆ !! ನಡೆ ಕನ್ನಡ ನುಡಿ ಕನ್ನಡ,ತನು ಕನ್ನಡ ಮನ ಕನ್ನಡ,ಕಣಕಣ್ದಲ್ಲೂ ಹರಿಯುತ್ತಿರೋ,ಬಿಸಿ ನೆತ್ತರ ಕಿಡಿ ಕನ್ನಡ,ನಿನ್ನ ಅಮ್ಮನ ಹೊತ್ತು ಪೊರೆದ,ವಾತ್ಸಲ್ಯದ ಮಣ್ಣು ಕನ್ನಡ,ನಾಲಿಗೆಗೆ ಮಾತು ಕೊಟ್ಟ,ತಾಯ್ನುಡಿಯು ಚಿರ ಕನ್ನಡ. -ಗೋವರ್...